ಅಪೊಸ್ತಲರ ಕೃತ್ಯಗಳು 20:21 - ಪರಿಶುದ್ದ ಬೈಬಲ್21 ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಿಯಾ ಜುದೆವಾಕ್ನಿ ಅನಿ ಗ್ರಿಕಾಂಚ್ಯಾ ಲೊಕಾಕ್ನಿ ತೆನಿ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆವ್ಚೆ, ಅನಿ ಧನಿಯಾ ಜೆಜುಚ್ಯಾ ವರ್ತಿ ವಿಶ್ವಾಸ್ ಥವ್ಚೆ ಮನುನ್ ಸಾಂಗ್ಲಾ. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.