Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:34 - ಪರಿಶುದ್ದ ಬೈಬಲ್‌

34 ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಿಯಾ ಮಾಜ್ಯಾ ಸ್ವತಾಚ್ಯಾ ಹಾತಾನಿ ರಾಬುನ್ ಮಾಜಿ ಅನಿ ಮಾಜ್ಯಾ ವಾಂಗ್ಡಾ ಹೊತ್ತ್ಯಾಂಚಿ ಗರ್ಜ್ ಪುರಾ ಕರ್ಲಾ, ಹೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:34
9 ತಿಳಿವುಗಳ ಹೋಲಿಕೆ  

ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.


ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.


ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು