Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:13 - ಪರಿಶುದ್ದ ಬೈಬಲ್‌

13 ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಪಾವ್ಲುನ್ ತುಮಿ ಕಶ್ಯಾಕ್ ರಡುನ್ಗೆತ್ ಮಾಜೆ ಹಿರ್‍ದೆ ಫುಟಿ ಸಾರ್ಕೆ ಕರುಲ್ಲ್ಯಾಸಿ? ಮಿಯಾ ಜೆರುಜಲೆಮಾತ್ ಬಂಧಿಹೊವ್ಕ್ ಥವ್ಡೆಚ್ ನ್ಹಯ್ ಧನಿಯಾ ಜೆಜುಚ್ಯಾ ನಾವಾಸಾಟಿ ಮರುಕ್ಬಿ ತಯಾರ್ ಹಾಂವ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:13
25 ತಿಳಿವುಗಳ ಹೋಲಿಕೆ  

ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.


ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.


ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.


ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.


ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.


ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.


ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.


“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’”


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆಯಲ್ಲಾ!” ಎಂದನು.


ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ಆಗ ಆ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು