Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:33 - ಪರಿಶುದ್ದ ಬೈಬಲ್‌

33 ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸೆನಾಧಿಪತಿನ್ ಸೈನಿಕಾಕ್ನಿ ಜಾವ್ನ್ ಪಾವ್ಲುಕ್ ಧರುನ್ ದೊನ್ ಸರ್ಪೊಳಿಯಾನಿ ಭಾಂದುಕ್ ಸಾಂಗ್ಲ್ಯಾನ್, ಅನಿ ತೆನಿ ಹ್ಯೊ ಮಾನುಸ್ ಕೊನ್? ಹೆನಿ ಕಾಯ್ ಚುಕ್ ಕರ್‍ಲಾ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:33
18 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.


ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.


ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.


ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದು ಕಟ್ಟಿದಳು.


ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರ ಕರೆತಂದರು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು