Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:34 - ಪರಿಶುದ್ದ ಬೈಬಲ್‌

34 ಅಲ್ಲಿದ್ದ ಜನರಲ್ಲಿ ಕೆಲವರು ಒಂದು ವಿಷಯದ ಬಗ್ಗೆ ಬೊಬ್ಬೆಹಾಕುತ್ತಿದ್ದರೆ, ಉಳಿದವರು ಇತರ ವಿಷಯಗಳ ಬಗ್ಗೆ ಬೊಬ್ಬೆಹಾಕುತ್ತಿದ್ದರು. ಈ ಗಲಿಬಿಲಿಯಿಂದಾಗಿಯೂ ಕೂಗಾಟದಿಂದಾಗಿಯೂ ಏನು ನಡೆಯಿತೆಂಬುದರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಲಾಗಲಿಲ್ಲ. ಆದ್ದರಿಂದ ಸೇನಾಧಿಪತಿಯು ಪೌಲನನ್ನು ಸೈನ್ಯದ ಕೋಟೆಯೊಳಕ್ಕೆ ತೆಗೆದುಕೊಂಡು ಹೋಗಲು ಸೈನಿಕರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವನಾರು? ಏನು ಮಾಡಿದ್ದಾನೆ ಎಂದು ಕೇಳಲು ಕೆಲವರು ಹೀಗೆ ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿವಿುತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಥೈತ್ಲಿ ಉಲ್ಲಿ ಲೊಕಾ ಯೆವ್ನ್ ಎಕ್ ವಿಶಯಾತ್ ಬೊಬ್ ಮಾರುಕ್ಲಾಗಲಿ ಹುರಲ್ಲಿ ಲೊಕಾ, ಅನಿ ದುಸ್ರ್ಯಾ ವಿಶಯಾತ್ ಬೊಬ್ ಮಾರುಕ್ಲಾಗಲಿ, ಹ್ಯೊ ಗದ್ದಲ್ ಬೊಬ್ ಮಾರುಲಾಗಲ್ಯಾನ್ ಭರುನ್ ಹೊತ್ತ್ಯಾ ಸಾಟ್ನಿ ಕಾಯ್ ಚಲುಲ್ಲಾ ಮನ್ತಲೆ ಖರೆ ಕಳ್ವುನ್ಗೆವ್ಕ್ ಹೊವ್ಕ್ ನಾ, ತಸೆ ಹೊವ್ನ್, ಸೆನಾಧಿಪತಿನ್ ಪಾವ್ಲುಕ್ ಕೊಟೆತ್ ಘೆವ್ನ್ ಜಾವ್ಕ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:34
8 ತಿಳಿವುಗಳ ಹೋಲಿಕೆ  

ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ಕೆಲವು ಜನರು ಒಂದು ವಿಷಯದ ಬಗ್ಗೆ ಬೊಬ್ಬೆ ಹಾಕುತ್ತಿದ್ದರೆ, ಉಳಿದ ಜನರು ಬೇರೆ ವಿಷಯಗಳ ಬಗ್ಗೆ ಕೂಗಾಡುತ್ತಿದ್ದರು. ಸಭೆಯು ಬಹಳ ಗಲಿಬಿಲಿಗೊಳಗಾಯಿತು. ತಾವು ಅಲ್ಲಿಗೆ ಯಾಕೆ ಬಂದಿದ್ದೇವೆ ಎಂಬುದೇ ಅನೇಕ ಜನರಿಗೆ ತಿಳಿದಿರಲಿಲ್ಲ.


ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.


ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.


ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ?


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.


ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು