Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:9 - ಪರಿಶುದ್ದ ಬೈಬಲ್‌

9 ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಕಾ ಲಗಿನ್ ಹೊವ್ ನಸಲ್ಲಿ ಲೆಕಿಯಾ ಹೊತ್ತಿ, ತೆನಿ ದೆವಾಚಿ ಬರಿ ಬಖರ್ ಪ್ರವಾದನ್ ಕರ್‍ತಲೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:9
13 ತಿಳಿವುಗಳ ಹೋಲಿಕೆ  

‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.


ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ.


ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು