Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:1 - ಪರಿಶುದ್ದ ಬೈಬಲ್‌

1 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲುನ್, ಮಾಜ್ಯಾ ವಿಶ್ವಾಸಾತ್ ಹೊತ್ತ್ಯಾ ಜುದೆವ್ ವಾಂಗ್ಡಿಯಾನು ಅನಿ ಬಾಬಾನು ಮಾಜ್ಯೊ ಪ್ರತಿವಾದ್ ಆಯ್ಕಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:1
21 ತಿಳಿವುಗಳ ಹೋಲಿಕೆ  

ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.


ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.


ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ.


ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.


ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.


ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.


ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.


ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು