Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:22 - ಪರಿಶುದ್ದ ಬೈಬಲ್‌

22 ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿ ಗೊಸ್ಟಿಯಾ ಸಾಂಗ್ತಾನಾ ಸಗ್ಳಿ ಲೊಕಾ ಪಾವ್ಲು ಸಾಂಗ್ತಲೆ ಆಯ್ಕುಲಾಲಿ ಮಾನಾ ತೆನಿ “ಅಸ್ಲ್ಯಾಕ್ನಿ ಜಿಮ್ನಿ ವೈನಾ ಕಾಡುನ್ ಟಾಕುಚೆ ಹ್ಯೊ ಜಿವಾನಿ ರ್‍ಹಾವ್ಕ್ ಯೊಗ್ಯಾನಾ” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:22
6 ತಿಳಿವುಗಳ ಹೋಲಿಕೆ  

ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು