ಅಪೊಸ್ತಲರ ಕೃತ್ಯಗಳು 23:1 - ಪರಿಶುದ್ದ ಬೈಬಲ್1 ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಪಾವ್ಲುನ್ ಜುದೆವಾಂಚ್ಯಾ ಝಡ್ತಿ ಕರ್ತಲ್ಯಾ ತಾಂಡ್ಯಾಕುಚ್ ಬಗುನ್, “ಮಾಜ್ಯಾ ಭಾವಾನು ಮಿಯಾ ಆಜ್ ಪತರ್ ದೆವಾಚ್ಯಾ ಫಿಡೆ ಬರ್ಯಾ ಮಾನಾನ್ ಚಲುನ್ಗೆತ್ ಯೆಲಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.