Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:20 - ಪರಿಶುದ್ದ ಬೈಬಲ್‌

20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ದಾಂಡ್ಗ್ಯಾ ಮಾನ್ಸಾನ್ ಅನಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಪಾವ್ಲುಕ್ ಉದ್ದ್ಯಾಚ್ಯಾ ಝಡ್ತಿ ಕರ್‍ತಲ್ಯಾ ಬೈಟಕಿಕ್ ಬಲ್ವುನ್ ಹಾನುಕ್ ತುಜ್ಯಾಕ್ಡೆ ಮಾಗುನ್ ಘೆವ್ಕ್ ಮನುನ್ ನಿರ್ಧಾರ್ ಕರ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:20
8 ತಿಳಿವುಗಳ ಹೋಲಿಕೆ  

ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.


ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು