Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:22 - ಪರಿಶುದ್ದ ಬೈಬಲ್‌

22 ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತ್ಯಾ ಸೈನಿಕಾಂಚ್ಯಾ ಮುಖಂಡಾನ್, “ತಿಯಾ ಮಾಕಾ ಸಾಂಗಲ್ಲ್ಯಾ ಯೆವ್ಜನಿಚ್ಯಾ ವಿಶಯಾತ್ ಕೊನಾಕ್ಬಿ ಸಾಂಗುನಕ್ಕೊ” ಮನುನ್ ಸಾಂಗುನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಧಾಡುನ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:22
6 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.


ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು