Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:9 - ಪರಿಶುದ್ದ ಬೈಬಲ್‌

9 ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಥೈ ಲೈ ಆವಾಜ್ ಹೊಲೊ, ಫಾರಿಜೆವಾಂಚ್ಯಾ ತಾಂಡಾತ್ಲಿ ಥೊಡಿ ಲೊಕಾ ಧರ್ಮ ಶಿಕಾಪಾ ಕರ್ತಲೆ ಉಟುನ್ ಇಬೆ ರಾವ್ನ್ ಹ್ಯಾ ಮಾನ್ಸಾಕ್ಡೆ ಅಮ್ಕಾ ಕಾಯ್ಬಿ ಚುಕ್‍ ದಿಸುನ್ ಯೆಯ್ನಾ ಹೊಲಾ! ಕಾಯ್ಕಿ ತೆಚ್ಯಾ ವಾಂಗ್ಡಾ ಬೊಲುಕ್ ಫಿರೆ ಮನುನ್ ವಾದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:9
23 ತಿಳಿವುಗಳ ಹೋಲಿಕೆ  

ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?’ ಎಂದು ಹೇಳಿತು.


ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.


ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.


ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.


ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.


ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು.


(ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)


ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.


ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.


ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.


ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.


ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.


ಸೌಲನು, “ನೀನೇ ನೀತಿವಂತನು. ನಾನು ತಪ್ಪು ಮಾಡಿದೆ. ನೀನು ನನಗೆ ಒಳ್ಳೆಯವನಾಗಿದ್ದೆ; ಆದರೆ ನಾನು ನಿನಗೆ ಕೆಟ್ಟವನಾದೆ.


ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ಈ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಈ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.


ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.


“ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು