Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:14 - ಪರಿಶುದ್ದ ಬೈಬಲ್‌

14 “ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಮಿಯಾ ತುಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಹೆನಿ ಮಾಕಾ ಧರ್ಮಾಕ್ ವಿರೊದ್ ಕರ್‍ತಲೊ ಮನುನ್ ಸಾಂಗ್ತಲ್ಲ್ಯಾ ವಾಟೆನ್ ಚಲ್ತಲೊ ಮಿಯಾ ಅಮ್ಚ್ಯಾ ಪುರ್ವಜ್ಯಾಂಚ್ಯಾ ದೆವಾಕ್ ಆರಾದನ್ ಕರ್‍ತಾ, ಖರೆ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಅನಿ ಪ್ರವಾದ್ಯಾಂಚ್ಯಾ ಪುಸ್ತಕಾತ್ನಿ ಲಿವಲ್ಲೆ ಹೊತ್ತ್ಯಾ ಹರ್ ಎಕಾಕ್ಬಿ ಮಿಯಾ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:14
44 ತಿಳಿವುಗಳ ಹೋಲಿಕೆ  

ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.


ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.


ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು.


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


(ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.)


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.


ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.


“ಅನನೀಯನು ನನಗೆ, ‘ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.


ಆದರೆ ಆ ಯೆಹೂದ್ಯರಲ್ಲಿ ಕೆಲವರು ಮೊಂಡರಾದರು. ಅವರು ನಂಬದೆ ದೇವರ ಮಾರ್ಗವನ್ನು ಜನರೆಲ್ಲರ ಎದುರಿನಲ್ಲಿ ದೂಷಿಸಿದರು. ಆದ್ದರಿಂದ ಪೌಲನು ಏಷ್ಯಾ ಪ್ರಾಂತ್ಯದ ಆ ಯೆಹೂದ್ಯರನ್ನೆಲ್ಲ ಬಿಟ್ಟು, ಯೇಸುವಿನ ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ತುರನ್ನನ ಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸಿದನು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.


ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!


ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.


“ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.


ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.


“ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.


“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ರಾಜರುಗಳ ಮುಂದೆಯೂ ಯೆಹೋವನ ಒಡಂಬಡಿಕೆಯ ಕುರಿತು ಚರ್ಚಿಸುವೆನು, ನಾಚಿಕೆಪಡುವುದಿಲ್ಲ.


ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.


ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.


ಆದರೆ ಆ ಸಮಯದಲ್ಲಿ ದೇವರ ಮಾರ್ಗದ ಬಗ್ಗೆ ತೀವ್ರ ಗಲಭೆಯೊಂದು ಎಫೆಸದಲ್ಲಿ ಉಂಟಾಯಿತು. ಅದು ನಡೆದ ರೀತಿ ಇಂತಿದೆ:


ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.


ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.


“ನನ್ನ ಇಡೀ ಜೀವಮಾನದ ಬಗ್ಗೆ ಎಲ್ಲಾ ಯೆಹೂದ್ಯರಿಗೆ ಗೊತ್ತಿದೆ. ನಾನು ಆರಂಭದಿಂದ ನನ್ನ ಸ್ವದೇಶದಲ್ಲಿಯೂ ಅನಂತರ ಜೆರುಸಲೇಮಿನಲ್ಲಿಯೂ ಜೀವಿಸಿದ ರೀತಿಯನ್ನು ಅವರು ಬಲ್ಲರು.


ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು