ಅಪೊಸ್ತಲರ ಕೃತ್ಯಗಳು 24:14 - ಪರಿಶುದ್ದ ಬೈಬಲ್14 “ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ಮಿಯಾ ತುಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಹೆನಿ ಮಾಕಾ ಧರ್ಮಾಕ್ ವಿರೊದ್ ಕರ್ತಲೊ ಮನುನ್ ಸಾಂಗ್ತಲ್ಲ್ಯಾ ವಾಟೆನ್ ಚಲ್ತಲೊ ಮಿಯಾ ಅಮ್ಚ್ಯಾ ಪುರ್ವಜ್ಯಾಂಚ್ಯಾ ದೆವಾಕ್ ಆರಾದನ್ ಕರ್ತಾ, ಖರೆ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾತ್ ಅನಿ ಪ್ರವಾದ್ಯಾಂಚ್ಯಾ ಪುಸ್ತಕಾತ್ನಿ ಲಿವಲ್ಲೆ ಹೊತ್ತ್ಯಾ ಹರ್ ಎಕಾಕ್ಬಿ ಮಿಯಾ ವಿಶ್ವಾಸ್ ಕರ್ತಾ. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.