Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:22 - ಪರಿಶುದ್ದ ಬೈಬಲ್‌

22 ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಫೆಲಿಕ್ಸಾನ್ ಜೆಜುಚ್ಯಾ ವಾಟೆಚ್ಯಾ ವಿಶಯಾಚ್ಯಾ ಅದ್ದಿಚ್ ಪಾಜೆ ತವ್ಡೆ ಅರ್ಥ್ ಕರುನ್ ಘೆಟಲ್ಯಾನ್ ಅನಿ ತೆನಿ ಇಚಾರ್ನೆ ಹೊತಲೆ ಅರ್ದ್ಯಾಕುಚ್ ಇಬೆಕರುನ್ “ಸೈನಿಕಾಂಚೊ ಮುಖಂಡ್ ಲುಸಿಯಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ನಿರ್ದಾರ್ ಕರ್‍ತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:22
11 ತಿಳಿವುಗಳ ಹೋಲಿಕೆ  

ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.


ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.


“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.


ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.


ಆ ಯೆಹೂದ್ಯರು ಇನ್ನೂ ಸ್ವಲ್ಪಕಾಲ ಇರಬೇಕೆಂದು ಪೌಲನನ್ನು ಕೇಳಿಕೊಂಡರು. ಆದರೆ ಅವನು ಒಪ್ಪಲಿಲ್ಲ.


ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ


ಆಗ ಹೆರೋದನು ಪೂರ್ವ ದೇಶದ ಜ್ಞಾನಿಗಳನ್ನು ರಹಸ್ಯವಾಗಿ ಕರೆಯಿಸಿ, ಅವರು ಆ ನಕ್ಷತ್ರವನ್ನು ಕಂಡ ಸರಿಯಾದ ಸಮಯವನ್ನು ಅವರಿಂದ ತಿಳಿದುಕೊಂಡನು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು