Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:23 - ಪರಿಶುದ್ದ ಬೈಬಲ್‌

23 ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾವ್ಲುಕ್ ರಾಕುಕ್ ಥವ್ಚೆ ಮನುನ್ ತೆನಿ ಸಾಂಗ್ಲ್ಯಾನ್, ಖರೆ ಪಾವ್ಲುಚ್ಯಾ ವಾಂಗ್ಡಿಯಾಕ್ನಿ ತೆಕಾ ಪಾಜೆ ಹೊಲ್ಲಿ ವಸ್ತಾ ಹಾನುನ್ ದಿವ್ಕ್ ಅವ್ಕಾಸ್ ದಿವ್ಚೆ ಮನುನ್ ತೆನಿ ಅದಿಕಾರಾನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:23
10 ತಿಳಿವುಗಳ ಹೋಲಿಕೆ  

ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.


ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.


ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)


ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:


ಆದರೆ ಫೆಸ್ತನು, “ಇಲ್ಲ! ಪೌಲನನ್ನು ಸೆಜರೇಯದಲ್ಲೇ ಇರಿಸಲಾಗುವುದು. ನಾನೇ ಅಲ್ಲಿಗೆ ಬೇಗ ಹೋಗಲಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು