Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:12 - ಪರಿಶುದ್ದ ಬೈಬಲ್‌

12 ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಫೆಸ್ತಾನ್ ಅಪ್ನಾಕ್ ಸಲಹಾ ದಿತಲ್ಯಾಂಚ್ಯಾಕ್ನಾ ಹೆಚ್ಯಾ ವಿಶಯಾತ್ ಬೊಲ್ಲ್ಯಾನ್, ಅನಿ ತಿಯಾ ಮಾಜಿ ವಿಶಯಾತ್ ಸಿಸರಾಚ್ ಸಮಾ ಕರುಂದಿತ್ ಮನುನ್ ಸಾಂಗಲ್ಲ್ಯಾ ಸಾಟ್ನಿ ತುಕಾ ತೆಜ್ಯಾಕ್ಡೆಚ್ ಧಾಡುನ್ ದಿತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:12
17 ತಿಳಿವುಗಳ ಹೋಲಿಕೆ  

ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.


ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.


ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.


ಅದಕ್ಕೆ ಅವನು, ‘ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು’ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಆದ್ದರಿಂದ ನಿನ್ನ ಅಭಿಪ್ರಾಯವನ್ನು ತಿಳಿಸು. ಸೀಸರನಿಗೆ ತೆರಿಗೆ ಕೊಡುವುದು ಸರಿಯೋ ಅಥವಾ ತಪ್ಪೋ?” ಎಂದು ಕೇಳಿದರು.


ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು