Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:19 - ಪರಿಶುದ್ದ ಬೈಬಲ್‌

19 ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರ ಮತದ ವಿಷಯದಲ್ಲಿಯೂ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು. ಆ ಯೇಸು ಜೀವಿತನಾಗಿದ್ದಾನೆಂದು ಪೌಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ಸಾಂಗಲಿ ಸಂಗ್ತಿಯಾ ತೆಂಚ್ಯಾ ಸ್ವತಾಚ್ಯಾ ಧರ್ಮಾಕ್ ಸಮಂದ್ ಪಡಲಿ ಹೊತ್ತಿ, ಅನಿ ಜೆಜು ಮನ್ತಲ್ಯಾ ಮಾನ್ಸಾಕ್ ಸಮಂದ್ ಪಡಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:19
14 ತಿಳಿವುಗಳ ಹೋಲಿಕೆ  

ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.


ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,


ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.


ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.


ಬಳಿಕ ಅವರು ಎಫೆಸ ಪಟ್ಟಣಕ್ಕೆ ಹೋದರು. ಪ್ರಿಸ್ಕಿಲ್ಲ ಮತ್ತು ಅಕ್ವಿಲರನ್ನು ಪೌಲನು ಬಿಟ್ಟಿಹೋದದ್ದು ಇಲ್ಲಿಯೇ. ಪೌಲನು ಎಫೆಸದಲ್ಲಿದ್ದಾಗ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚಿಸಿದನು.


ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಯೆಹೂದ್ಯರು ನಿಂತುಕೊಂಡು ಅವನ ಮೇಲೆ ದೋಷಾರೋಪಣೆಗಳನ್ನು ಹೊರಿಸಿದರು. ಆದರೆ ನಾನು ಯೋಚಿಸಿದ ಪ್ರಕಾರ ಯೆಹೂದ್ಯರು ಅವನ ಮೇಲೆ ಯಾವ ಕೆಟ್ಟ ಅಪರಾಧವನ್ನಾಗಲಿ ಹೊರಿಸಲಿಲ್ಲ.


ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು