Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:23 - ಪರಿಶುದ್ದ ಬೈಬಲ್‌

23 ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದುಸ್ರ್ಯಾಂದಿಸಿ ಅಗ್ರಿಪ್ಪರಾಜಾ, ಅನಿ ಬೆರ್ನಿಕೆ ರಾನಿ ಆಡಂಬರಾಚೆ ಕಪ್ಡೆನೆಸುನ್ ಘೆವ್ನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಚ್ಯಾ ವಾಂಗ್ಡಾ ಅನಿ ಸೆಜರೆಯಾತ್ಲ್ಯಾ ಪ್ರಮುಖ್ ಲೊಕಾಂಚ್ಯಾ ವಾಂಗ್ಡಾ ಝಡ್ತಿ ಕರ್‍ತಲ್ಯಾ ಜಾಗ್ಯಾರ್ ಯೆಲೆ, ತನ್ನಾ ಪಾವ್ಲುಕ್ ಭುತ್ತುರ್ ಹಾನುಚೆ ಮನುನ್ ಫೆಸ್ತಾನ್ ಸೈನಿಕಾಕ್ನಿ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:23
18 ತಿಳಿವುಗಳ ಹೋಲಿಕೆ  

ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು


ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.


ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.


ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.


ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ನಾನು ಈ ದೇಶವನ್ನು ಬರಿದಾಗಿಯೂ ಬಂಜರು ಭೂಮಿಯನ್ನಾಗಿಯೂ ಮಾಡುವೆನು. ಈ ದೇಶವು ಹೆಮ್ಮೆಪಟ್ಟುಕೊಳ್ಳುತ್ತಿದ್ದ ವಿಷಯಗಳನ್ನೆಲ್ಲಾ ಅವರು ಕಳೆದುಕೊಳ್ಳುವರು. ಇಸ್ರೇಲಿನ ಪರ್ವತಗಳು ಬೋಳುಗುಡ್ಡಗಳಾಗುವವು. ಯಾರೂ ಅದನ್ನು ದಾಟಿ ಹೋಗಲಾರರು.


ಕ್ರೂರ ರಾಷ್ಟ್ರಗಳ ಆ ಸೈನಿಕರಿಂದ ನಿನ್ನ ಜನರನ್ನು ಯುದ್ಧದಲ್ಲಿ ಹತಗೊಳಿಸುವೆನು. ಈಜಿಪ್ಟಿನ ಜನರನ್ನೂ ಅವರು ಹೆಮ್ಮೆಪಡುವಂತ ವಸ್ತುಗಳನ್ನೂ ಆ ಸೈನಿಕರು ನಾಶಗೊಳಿಸುವರು.


ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ. ನಿನ್ನ ಹಾರ್ಪ್‌ವಾದ್ಯದ ಸ್ವರವು ನಿನ್ನ ಅಹಂಕಾರದ ಆತ್ಮವನ್ನು ಸಾರಿಹೇಳುತ್ತವೆ. ಹುಳಗಳು ನಿನ್ನ ಶರೀರವನ್ನು ತಿಂದುಬಿಡುವವು. ಹಾಸಿಗೆಯೋ ಎಂಬಂತೆ ನೀನು ಅವುಗಳ ಮೇಲೆ ಮಲಗಿಕೊಳ್ಳುವೆ. ಹುಳಗಳು ನಿನ್ನ ಶರೀರವನ್ನು ಕಂಬಳಿಯಂತೆ ಮುಚ್ಚಿಕೊಳ್ಳುವವು.


ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”


ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.


ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು