Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:7 - ಪರಿಶುದ್ದ ಬೈಬಲ್‌

7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಾವ್ಲು ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಯೆಲೊ ಜೆರುಜಲೆಮಾತ್ನಾ ಜುದೆವಾಂಚಿ ಲೊಕಾ ತೆಚ್ಯಾ ಆಜುಭಾಜುಕ್ ಇಬೆ ರ್‍ಹಾವ್ನ್ ಲೈ ಚುಕ್ ಸಾಂಗುಲಾಗ್ಲೆ ತ್ಯಾತುರ್‍ಲೆ ಎಕ್ಬಿ ಖರೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:7
16 ತಿಳಿವುಗಳ ಹೋಲಿಕೆ  

ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.


ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಅಲ್ಲಿ ನಿಂತುಕೊಂಡಿದ್ದರು. ಅವರು ಯೇಸುವಿಗೆ ವಿರುದ್ಧವಾಗಿ ಕೂಗುತ್ತಿದ್ದರು.


ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.


ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.


ಹಾಮಾನನು ಅರಸನಾದ ಅಹಷ್ವೇರೋಷನ ಬಳಿಗೆ ಬಂದು, “ಅರಸನೇ, ನಿನ್ನ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗದವರು ಹಬ್ಬಿರುತ್ತಾರೆ. ಇವರು ಇತರ ಎಲ್ಲಾ ಜನರಿಂದ ಪ್ರತ್ಯೇಕವಾಗಿ ಇರುತ್ತಾರೆ. ಅವರ ನೀತಿರೀತಿಗಳೆಲ್ಲಾ ಬೇರೆ ಜನರಿಗಿಂತ ವಿಭಿನ್ನವಾಗಿರುತ್ತದೆ. ಅವರು ರಾಜನ ಕಟ್ಟಳೆಗೆ ವಿಧೇಯರಾಗುವುದಿಲ್ಲ. ನಿನ್ನ ರಾಜ್ಯದಲ್ಲಿ ಅವರು ಹೀಗೆಯೇ ಇರುವದು ಒಳ್ಳೆಯದಲ್ಲ.


ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.


ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು,


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು