Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:16 - ಪರಿಶುದ್ದ ಬೈಬಲ್‌

16 ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನನ್ನು ನನ್ನ ಸೇವಕನಾಗಿಯೂ ಸಾಕ್ಷಿಯಾಗಿಯೂ ನೇವಿುಸುವದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ನಾನು ಈಗಲೂ ಮುಂದೆ ನಿನಗೆ ಕೊಡಲಿಕ್ಕಿರುವ ದರ್ಶನಗಳಲ್ಲಿಯೂ ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಉಟುನ್ ಇಬೆ ರ್‍ಹಾ! ತುಕಾ ಮಾಜೊ ಸೆವಕ್ ಹೊವ್ನ್ ಸಾಕ್ಷಿ ಎಚುನ್ ಘೆವ್ಕ್ ಸಾಟ್ನಿ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟಲ್ಯಾ ವಿಶಯಾತ್ ಸಾಕ್ಷಿ ಹೊವ್ನ್ ರ್‍ಹಾತೆಯ್ ಹೆಕಾಚ್ ಮನುನ್ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:16
34 ತಿಳಿವುಗಳ ಹೋಲಿಕೆ  

ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.


ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು.


ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.


ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.


ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.


ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.


ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.


ನಾನು ಹೋಗಲೇಬೇಕೆಂದು ದೇವರು ನನಗೆ ತಿಳಿಸಿದ್ದರಿಂದ ವಿಶ್ವಾಸಿಗಳ ನಾಯಕರಾದ ಈ ಜನರ ಬಳಿಗೆ ಹೋದೆನು. ನಾವಷ್ಟೇ ಇದ್ದಾಗ, ಯೆಹೂದ್ಯರಲ್ಲದವರಿಗೆ ಸಾರುವ ಸುವಾರ್ತೆಯನ್ನು ಇವರಿಗೆ ತಿಳಿಸಿದೆನು. ನಾನು ಮೊದಲು ಮಾಡಿದ ಸೇವೆ ಮತ್ತು ಈಗ ಮಾಡುತ್ತಿರುವ ಸೇವೆ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಇವರಿಗೆ ಅರ್ಥವಾಗುವಂತೆ ನನ್ನ ಸೇವೆಯ ಬಗ್ಗೆ ತಿಳಿಸಿದೆನು.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.


ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.


ಇದೆಲ್ಲಾ ದೇವರಿಂದಲೇ ಆಯಿತು. ಕ್ರಿಸ್ತನ ಮೂಲಕವಾಗಿ ದೇವರು ನಮ್ಮನ್ನು ತನ್ನೊಂದಿಗೆ ಸಮಾಧಾನ ಪಡಿಸಿಕೊಂಡಿದ್ದಾನೆ. ಇದಲ್ಲದೆ ಇತರರನ್ನು ಈ ಸಮಾಧಾನಕ್ಕೆ ಕರೆದುಕೊಂಡು ಬರುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.


ದೇವರು ಕ್ರಿಸ್ತನ ಮೂಲಕವಾಗಿ ನನಗೆ ಅಪೊಸ್ತಲನೆಂಬ ವಿಶೇಷ ಕೆಲಸವನ್ನು ಕೊಟ್ಟನು. ದೇವರಲ್ಲಿ ನಂಬಿಕೆಯಿಡುವಂತೆಯೂ ದೇವರಿಗೆ ವಿಧೇಯರಾಗುವಂತೆಯೂ ಎಲ್ಲಾ ಜನಾಂಗಗಳ ಜನರನ್ನು ನಡೆಸಬೇಕೆಂದು ದೇವರು ನನಗೆ ಈ ಕೆಲಸವನ್ನು ಕೊಟ್ಟನು. ನಾನು ಈ ಕೆಲಸವನ್ನು ಕ್ರಿಸ್ತನಿಗಾಗಿ ಮಾಡುತ್ತೇನೆ.


“ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.


ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.


ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.


“ನಾನು, ‘ಪ್ರಭುವೇ, ನೀನು ಯಾರು?’ ಎಂದೆನು. “ಪ್ರಭುವು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು