Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:29 - ಪರಿಶುದ್ದ ಬೈಬಲ್‌

29 ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪಾವ್ಲುನ್, “ಸರಳ್ ಕಿ ಕಸ್ಟ್ ಕಿ ತೆ ಮಾಕಾ ಮುಖ್ಯ್ ನ್ಹಯ್ ತಿಯಾ ಎಕುಚ್ ನ್ಹಯ್, ಆಜ್ ಮಿಯಾ ಸಾಂಗಲ್ಲೆ ಆಯ್ಕುನ್ ಘೆಟಲ್ಲೊ ಹರಿಎಕ್ಲೊ ರಾಕನ್ ಹೊವ್ಚೆ ಅನಿ ಮಾಜ್ಯಾ ಸಾರ್ಕೆ ಹೊವ್ಚೆ ಮನುನ್ ಮಿಯಾ ದೆವಾಚ್ಯಾ ಜಗ್ಗೊಳ್ ಮಾಗ್ನಿ ಕರ್‍ತಾ, ಹೊಲ್ಯಾರ್ ಹ್ಯೊ ಅನ್ಮಾನ್ ತುಕಾ ನಕ್ಕೊ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:29
18 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.


ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.


ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.


ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.


ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.


ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.


ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.


ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.


ಆದರೆ ಮೋಶೆಯು, “ನೀನು ನನ್ನ ವಿಷಯದಲ್ಲಿ ಚಿಂತೆಪಡುತ್ತಿರುವುದೇಕೆ? ಯೆಹೋವನ ಜನರೆಲ್ಲರೂ ಪ್ರವಾದಿಗಳಾಗಿರಬೇಕೆಂದು ನಾನು ಬಯಸುತ್ತೇನೆ. ಅವರೆಲ್ಲರ ಮೇಲೆ ಯೆಹೋವನು ತನ್ನ ಆತ್ಮನನ್ನು ಇರಿಸಬೇಕೆಂದು ನಾನು ಬಯಸುತ್ತೇನೆ” ಎಂದು ಉತ್ತರಿಸಿದನು.


ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.


ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು