Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:3 - ಪರಿಶುದ್ದ ಬೈಬಲ್‌

3 ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನದಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ತುಮ್ಚ್ಯಾ ವಾಂಗ್ಡಾ ಬೊಲುಕ್ ಲೈ ಕುಶಿ ಹೊತಾ, ಕಶ್ಯಾಕ್ ಮಟ್ಲ್ಯಾರ್, ಜುದೆವಾಂಚ್ಯಾ ಸಗ್ಳ್ಯಾ ಪದ್ದತಿಯಾ ಅನಿ ಜುದೆವಾಂಚಿ ಲೊಕಾ ವಾದ್ ಕರ್ತಲ್ಯಾಚ್ಯಾ ವಿಶಯಾತ್ ತುಕಾ ಬರೆ ಕರುನ್ ಗೊತ್ತ್ ಹಾಯ್, ತೆಚೆಸಾಟ್ನಿ ಮಾಜ್ಯಾ ಗೊಸ್ಟಿಯಾ ಸಗ್ಳಿ ತಾಳ್ಮೆನ್ ಆಯ್ಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:3
13 ತಿಳಿವುಗಳ ಹೋಲಿಕೆ  

ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.


ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.


ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!


ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.


ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.


ಈ ಯೆಹೂದ್ಯರು ನಿನ್ನ ಉಪದೇಶದ ಬಗ್ಗೆ ಕೇಳಿದ್ದಾರೆ. ಬೇರೆ ದೇಶಗಳಲ್ಲಿ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರಿಗೆ, “ನೀವು ಮೋಶೆಯ ಧರ್ಮಶಾಸ್ತ್ರವನ್ನು ತ್ಯಜಿಸಿರಿ; ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಬೇಡಿರಿ ಯೆಹೂದ್ಯರ ಸಂಪ್ರದಾಯಗಳಿಗೆ ವಿಧೇಯರಾಗಬೇಡಿರಿ ಎಂಬುದಾಗಿ ಹೇಳುತ್ತಿರುವಿಯೆಂದು ಅವರು ಕೇಳಿದ್ದಾರೆ.


“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.


“ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.


ಆಮೇಲೆ ಕ್ರಯಪತ್ರದ ರುಜು ಮಾಡಿದ ಒಂದು ಪ್ರತಿಯನ್ನು ಮತ್ತು ರುಜು ಮಾಡದ ಒಂದು ಪ್ರತಿಯನ್ನು ತೆಗೆದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು