Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:6 - ಪರಿಶುದ್ದ ಬೈಬಲ್‌

6 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವು ನೆರವೇರುವದೆಂಬ ನಿರೀಕ್ಷೆಯನ್ನು ಕುರಿತೇ ವಿಚಾರಿಸಲ್ಪಡುವವನಾಗಿ ಇಲ್ಲಿ ನಿಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಅಮ್ಕಾ ಪುರ್ವಜ್ ಲೊಕಾಕ್ನಿ ಕರಲ್ಲ್ಯಾ ಗೊಸ್ಟಿಕ್ನಿ ಮಿಯಾ ಬರೊಸೊ ಥವಲ್ಯಾ ಸಾಟ್ನಿಚ್ ಅತ್ತಾ ಝಡ್ತಿ ಕರುಕ್ ಗುರಿ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:6
59 ತಿಳಿವುಗಳ ಹೋಲಿಕೆ  

ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?


ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”


“ಸಮುವೇಲನು ಮತ್ತು ಅವನ ನಂತರದ ಪ್ರವಾದಿಗಳು ಇಂದಿನ ಈ ಕಾಲದ ಬಗ್ಗೆ ಮಾತಾಡಿದರು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಕೊಂಬೆ ಎಂಬ ಒಬ್ಬಾತನು ಇದ್ದಾನೆ. ಆತನು ಬೆಳೆದು ಬಲಿಷ್ಠನಾಗುವನು. ಆತನು ದೇವಾಲಯವನ್ನು ಕಟ್ಟುವನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


“‘ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಬನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.


ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು