Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:7 - ಪರಿಶುದ್ದ ಬೈಬಲ್‌

7 ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಗೊಸ್ಟಿಯಾ ಖರೆಚ್ ಖರಿ ಹೊತ್ಯಾತ್ ಮನುನ್ ಬಾರಾ ಕುಳಿಚ್ಯಾ ಅಮ್ಚ್ಯಿ ಲೊಕಾ ಬರೊಸೊ ಥವ್ನ್ ಹಾತ್, ಜುದೆವಾಂಚಿ ಲೊಕಾ ದಿಸ್ ರಾತ್ ದೆವಾಚಿ ಸೆವಾ ಕರ್‍ತಲೆ ಹ್ಯೊ ಬರೊಸೊ ಘೆವ್ನ್ ಹಾಯ್ ಮನುನ್ ಹೆನಿ ಮಾಜ್ಯಾ ವರ್‍ತಿ ಅಪ್ವಾದಾ ಸಗ್ಳ್ಯಿ ಘಾಟ್ಲಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:7
19 ತಿಳಿವುಗಳ ಹೋಲಿಕೆ  

ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.


ಹಗಲಿರುಳು ನಿಮ್ಮ ವಿಷಯದಲ್ಲಿ ಬಹಳವಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ. ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ನಂಬಿಕೆಯಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


“ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.


ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!


ಆಮೇಲೆ ಸೆರೆಯಿಂದ ಹಿಂತಿರುಗಿಬಂದ ಯೆಹೂದ್ಯರು ಇಸ್ರೇಲ್ ದೇವರಿಗೆ ಇಸ್ರೇಲರ ಎಲ್ಲಾ ಕುಲಗಳವರಿಗಾಗಿ ಹನ್ನೆರಡು ಹೋರಿಗಳನ್ನು, ತೊಂಭತ್ತಾರು ಟಗರುಗಳನ್ನು, ಎಪ್ಪತ್ತೇಳು ಗಂಡು ಕುರಿಗಳನ್ನು ಮತ್ತು ಹನ್ನೆರಡು ಗಂಡು ಆಡುಗಳನ್ನು ಸರ್ವಾಂಗಹೋಮ ಯಜ್ಞವನ್ನಾಗಿಯೂ ಮತ್ತು ಪಾಪಪರಿಹಾರಕ ಯಜ್ಞವನ್ನಾಗಿಯೂ ಸಮರ್ಪಿಸಿದರು.


ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.


ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು