Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:43 - ಪರಿಶುದ್ದ ಬೈಬಲ್‌

43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಖರೆ ಸೈನಿಕಾಂಚೊ ಅಧಿಕಾರಿಕ್ ಪಾವ್ಲುಕ್ ಹುರ್ವ್ವುಚೆ ಹೊತ್ತೆ, ತಸೆ ಹೊವ್ನ್, ತೆನಿ ತೆಂಕಾ ಚೊರಾಂಚೊ ಜಿವ್ ಕಾಡುಕ್ ಸೊಡುಕ್ನಾ ಹೆಚ್ಯಾ ಬದ್ಲಾಕ್ ತೆನಿ ಪೆವುಕ್ ಯೆತಲೆ ಸಗ್ಳೆ ಹುಡುನ್ ಪೆವುನ್ಗೆತ್ ದಂಡೆಕ್ ಪಾವಾ ಮನುನ್ ಹುಕುಮ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:43
8 ತಿಳಿವುಗಳ ಹೋಲಿಕೆ  

ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಮೂರು ಸಲ ಕಬ್ಬಿಣದ ಸರಳುಗಳಿಂದ ಏಟನ್ನು ತಿಂದಿದ್ದೇನೆ. ಒಂದು ಸಲ ಕಲ್ಲೆಸೆದು ನನ್ನನ್ನು ಅರೆಜೀವ ಮಾಡಿದರು. ಮೂರು ಸಲ ನಾನಿದ್ದ ಹಡಗುಗಳು ಒಡೆದುಹೋದವು. ಒಮ್ಮೆ, ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿರಬೇಕಾಯಿತು.


ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಆದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.


ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.


ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.


ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು