Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:5 - ಪರಿಶುದ್ದ ಬೈಬಲ್‌

5 ಸಿಲಿಸಿಯಾಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ನಾವು ದಾಟಿದೆವು. ಬಳಿಕ ನಾವು ಲುಸಿಯ ಪ್ರಾಂತ್ಯದಲ್ಲಿರುವ “ಮುರ” ಎಂಬ ಊರಿಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಿಲಿಸಿಯಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಸಿಯ ಪ್ರಾಂತ್ಯದಲ್ಲಿರುವ ‘ಮುರ’ ಎಂಬ ಊರಿಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಿಲಿಕ್ಯಕ್ಕೂ ಪಂಫೂಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಿಲಿಸಿಯಾಕ್ ಅನಿ ಪಾಂಪಿಲಿಯಾಕ್ ಇದ್ರಾಕ್ ಹೊತ್ತ್ಯಾ ಸಮುಂದರಾತ್ನಾ ಅಮಿ ದಾಟ್ಲಾಂವ್ ಅನಿ ಲುಸಿಯಾಚ್ಯಾ ಮುರ್ ಮನ್ತಲ್ಯಾ ಜಾಗ್ಯಾಕ್ ಅಮಿ ಯೆಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:5
9 ತಿಳಿವುಗಳ ಹೋಲಿಕೆ  

ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.


ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.


ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.


ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.


ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.


ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.


ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,


ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು