Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:20 - ಪರಿಶುದ್ದ ಬೈಬಲ್‌

20 ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಸೆ ಹೊವ್ನ್, ಮಿಯಾ ತುಮ್ಕಾ ಬಗುಚೆ, ಅನಿ ತುಮ್ಚ್ಯಾಕ್ಡೆ ಬೊಲುಚೆ ಮನುನ್ ಆಶ್ಯಾ ಕರ್‍ಲೊ, ಇಸ್ರಾಯೆಲಾಂಚ್ಯಾ ಬರೊಸ್ಯಾತ್ ಮಿಯಾ ವಿಶ್ವಾಸ್ ಥವಲ್ಲ್ಯಾ ಸಾಟ್ನಿ ಹ್ಯಾ ಸರ್ಪೊಳಿಯಾನಿ ಭಾಂದುನ್ ಥವಲ್ಲಿ ಹಾತ್, ಘೆಟಲೊ ಹೊಲಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:20
18 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ.


ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.


ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.


ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.


ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.


ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.


ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ಆದ್ದರಿಂದ, ನನ್ನನ್ನು ಇಲ್ಲಿಗೆ ಬರಬೇಕೆಂದು ಕರೆದ ಜನರೊಂದಿಗೆ ನಾನು ವಾದಮಾಡಲಿಲ್ಲ. ಆದರೆ ನೀವು ನನ್ನನ್ನು ಯಾಕೆ ಕರೆಸಿದಿರೆಂದು ದಯವಿಟ್ಟು ಈಗ ಹೇಳಿರಿ” ಎಂದನು.


ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು