Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:21 - ಪರಿಶುದ್ದ ಬೈಬಲ್‌

21-22 ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ತೆಂಕಾ ಜುದೆವಾಂಚ್ಯಾಕ್ನಾ ತುಜ್ಯಾ ವಿಶಯಾತ್ ಕಸ್ಲಿ ಚಿಟ್ ಬಿ ಯೆವ್ಕ್ ನಾ ಅನಿ ತೆನಿ ತುಜ್ಯಾ ವಿಶಯಾತ್ ಕಾಯ್ಬಿ ವಾಯ್ಟ್ ಬೊಲುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:21
8 ತಿಳಿವುಗಳ ಹೋಲಿಕೆ  

“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.


ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.


“ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.


ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು