ಅಪೊಸ್ತಲರ ಕೃತ್ಯಗಳು 28:21 - ಪರಿಶುದ್ದ ಬೈಬಲ್21-22 ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆನಿ ತೆಂಕಾ ಜುದೆವಾಂಚ್ಯಾಕ್ನಾ ತುಜ್ಯಾ ವಿಶಯಾತ್ ಕಸ್ಲಿ ಚಿಟ್ ಬಿ ಯೆವ್ಕ್ ನಾ ಅನಿ ತೆನಿ ತುಜ್ಯಾ ವಿಶಯಾತ್ ಕಾಯ್ಬಿ ವಾಯ್ಟ್ ಬೊಲುಕ್ನಾತ್. ಅಧ್ಯಾಯವನ್ನು ನೋಡಿ |
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.