Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:28 - ಪರಿಶುದ್ದ ಬೈಬಲ್‌

28 “ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅನಿ ಪಾವ್ಲುನ್ ದೆವಾಚ್ಯಾ ರಾಕ್ವನಾಚಿ ಬರಿ ಖಬರ್ ಜುದೆವಾಂಚೆ ನ್ಹಯ್ ಹೊಲ್ಲ್ಯಾಕ್ನಿ ಸಾಟ್ನಿ ಧಾಡುನ್ ಹೊಲಾ ತೆನಿ ತೆ ಆಯ್ಕ್ ತಾತ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್! ಮನುನ್ ಸಾಂಗುನ್ಗೆತ್ ಬೊಲ್ನೆ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:28
26 ತಿಳಿವುಗಳ ಹೋಲಿಕೆ  

“ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”


ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’


ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.


ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.


ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.


ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು