Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:3 - ಪರಿಶುದ್ದ ಬೈಬಲ್‌

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ತಂದು ಬೆಂಕಿಯ ಮೇಲೆ ಹಾಕುತ್ತಿದ್ದಾಗ ಬೆಂಕಿಯ ಶಾಖಕ್ಕೆ ವಿಷಸರ್ಪವೊಂದು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ಎಕ್ ನಾಕ್ಡಾಂಚೆ ವಜ್ಜೆ ಕರುನ್ ತೆ ಆಗಿರ್ ಥವ್ತಾನಾ ಆಗಿಚ್ಯಾ ಝಳಾಕ್ ಎಕ್ ವಿಶಾಚೊ ಸಾಪ್ ಭಾಯ್ರ್ ಯೆವ್ನ್ ಪಾವ್ಲುಚ್ಯಾ ಹಾತಿಕ್ ಸುತ್ತ್ ಘಾಲುನ್ ಧರುನ್ ಘೆಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:3
13 ತಿಳಿವುಗಳ ಹೋಲಿಕೆ  

“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ವಿಷದ ಹಾವಿನ ಮೊಟ್ಟೆಯಿಂದ ವಿಷದ ಹಾವಿನ ಮರಿಗಳು ಹೊರಬರುವಂತೆ ಅವರ ದುಷ್ಟತನವು ಹೊರಬರುವದು. ಆ ಮೊಟ್ಟೆಯನ್ನು ನೀವು ತಿಂದರೆ ಸಾಯುವಿರಿ. ಆ ಮೊಟ್ಟೆಯನ್ನು ಒಡೆದರೆ ವಿಷದ ಹಾವು ಹೊರಬರುವದು. ಜನರು ಹೇಳುವ ಸುಳ್ಳು, ಜೇಡರ ಬಲೆಯಂತಿರುವದು.


“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.”


ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.


ದುಷ್ಟನ ಪಾನೀಯವು ಹಾವಿನ ವಿಷದಂತಿದೆ. ಹಾವಿನ ನಾಲಿಗೆಯು ಅವನನ್ನು ಕೊಲ್ಲುವುದು.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.


ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು