Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:11 - ಪರಿಶುದ್ದ ಬೈಬಲ್‌

11 ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಪೇತ್ರ ಯೋಹಾನರನ್ನು ಹಿಡುಕೊಂಡೇ ಇರುವಾಗ ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಅವರ ಬಳಿಗೆ ಸೊಲೊಮೋನನದೆಂಬ ಹೆಸರುಳ್ಳ ಮಂಟಪಕ್ಕೆ ಗುಂಪು ಗುಂಪಾಗಿ ಓಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೊ ಸೊಟ್ಟೊ ಪೆದ್ರುಕ್ ಅನಿ ಜುವಾಂವಾಚ್ಯಾ ವಾಂಗ್ಡಾ ಜಾಯ್ತ್ ಹೊತ್ತೊ. ತೆಕಾ ಗುನ್ ಹೊಲ್ಲೆ ಬಗುನ್ ಲೊಕಾ ಸಗ್ಳಿ ಅಜಾಪ್ ಹೊಲ್ಯಾನಿ ಸೊಲೊಮನಾಚ್ಯಾ ದಾರಾಚ್ಯಾ ಜಗ್ಗೊಳ್ ಇಬೆ ಹೊತ್ತ್ಯಾ ತೆಂಚ್ಯಾಕ್ಡೆ ಸಗ್ಳಿ ಲೊಕಾ ಪಳುನ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:11
9 ತಿಳಿವುಗಳ ಹೋಲಿಕೆ  

ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.


ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು.


ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.


ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.


ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.


ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.


ಅಂದು ದೇವಾಲಯದೊಳಕ್ಕೆ ಹೋಗುತ್ತಿದ್ದ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಕೇಳಿದನು.


ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.


ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು