Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:12 - ಪರಿಶುದ್ದ ಬೈಬಲ್‌

12 ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ಪೆದ್ರುನ್ ತ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಇಸ್ರಾಯೆಲಾಂಚ್ಯಾ ಲೊಕಾನು ಹೆ ಬಗುನ್ ತುಮಿ ಕಶ್ಯಾಕ್ ಅಜಾಪ್ ಹೊತ್ತ್ಯಾಶಿ? ಹೊ ಚಲುಲಾಗಲೆ ಮಾಜ್ಯಾ ತಾಕ್ತಿನ್ ಮಿಯಾ ಕರ್‍ಲಾ ಮನುನ್ ಬಗುಲ್ಯಾಸಿ ಕಾಯ್? ಅಮಿ ಬರೆ ಪಾನಾನ್ ಹೊತ್ಯಾಕ್ ಹಿ ಕಾಮಾ ಹೊವ್ಲಾತ್ ಮನುನ್ ಚಿಂತುಲ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:12
15 ತಿಳಿವುಗಳ ಹೋಲಿಕೆ  

ನಮ್ಮ ಸ್ವಂತ ಶಕ್ತಿಯಿಂದಲೇ ನಾವು ಯಾವ ಒಳ್ಳೆಯದನ್ನಾದರೂ ಮಾಡಬಲ್ಲೆವೆಂದು ನಾನು ಹೇಳುತ್ತಿಲ್ಲ. ನಾವು ಮಾಡುವ ಕಾರ್ಯಗಳನ್ನು ದೇವರು ಒದಗಿಸಿದ ಸಾಮರ್ಥ್ಯದಿಂದಲೇ ಮಾಡುತ್ತೇವೆ.


ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.


ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.


ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಆ ಮನುಷ್ಯನು ಪೇತ್ರ ಮತ್ತು ಯೋಹಾನರನ್ನು ಹಿಡಿದುಕೊಂಡೇ ನಿಂತಿದ್ದನು. ಅವನಿಗೆ ಗುಣವಾದದ್ದರಿಂದ ಜನರೆಲ್ಲರೂ ಆಶ್ಚರ್ಯಗೊಂಡಿದ್ದರು. ಸೊಲೊಮೋನನ ಮಂಟಪದ ಬಳಿ ನಿಂತಿದ್ದ ಪೇತ್ರ ಮತ್ತು ಯೋಹಾನರ ಬಳಿ ಅವರು ಓಡಿಬಂದರು.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು