ಅಪೊಸ್ತಲರ ಕೃತ್ಯಗಳು 3:17 - ಪರಿಶುದ್ದ ಬೈಬಲ್17 “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ ಮಾಜ್ಯಾ ಭಾವಾನೊ ಅನಿ ಭೆನಿಯಾನೊ, ತುಮ್ಕಾ ಕಳಿಸ್ತಾನಾ ಅಶೆ ಕರ್ಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ಮೊಟ್ಯಾ ಮಾನ್ಸಾನಿಬಿ ಜೆಜುಕ್ ತಿರಸ್ಕಾರ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.