Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:2 - ಪರಿಶುದ್ದ ಬೈಬಲ್‌

2 ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಎಕ್ ಜಲ್ಮಿ ಸೊಟ್ಟೊ ಹೊತ್ತೊ ತೆಜ್ಯಾಕ್ಡೆ ಚಲುಕ್ ಹೊಯ್ನಶಿ, ತೆಸೆ ಹೊವ್ನ್ ತೆಚಿ ವಾಂಗ್ಡಿ ಲೊಕಾ ತೆಕಾ ಸದ್ದಿ ಉಕ್ಲುನ್ ಘೆವ್ನ್ ಜಾವ್ನ್ ಭಿಕ್ ಮಾಗುಸಾಟಿ ತೆಕಾ ಸುದಂರ್ ದ್ವಾರ್ ಮನ್ತಲ್ಯಾ ದಡ್ಪ್ಯಾಕ್ಡೆ ಬಸ್ವುನ್ ಥೈಯ್ತ್, ತೊ ಸೊಟ್ಟೊ ತ್ಯಾ ದಡ್ಪ್ಯಾಕ್ಡೆ ಬಸುನ್ ದೆವಾಚ್ಯಾ ಗುಡಿತ್ ಜಾಯ್ತ್ ಯೆತಲ್ಯಾಂಚ್ಯಾಕ್ಡೆ ಭಿಕ್ ಮಾಗುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:2
9 ತಿಳಿವುಗಳ ಹೋಲಿಕೆ  

ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.


ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು, “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.


ಅಲ್ಲಿ ಲಾಜರನೆಂಬ ಒಬ್ಬ ಬಡಮನುಷ್ಯನೂ ಇದ್ದನು. ಅವನ ಮೈತುಂಬ ಹುಣ್ಣುಗಳಿದ್ದವು. ಅವನು ಐಶ್ವರ್ಯವಂತನ ಮನೆಯ ಹೊರಬಾಗಿಲ ಬಳಿ ಬಿದ್ದುಕೊಂಡಿರುತ್ತಿದ್ದನು.


ಆ ಮನುಷ್ಯನು, ‘ಕೊರ್ನೇಲಿಯನೇ! ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ. ನೀನು ಬಡಜನರಿಗೆ ಕೊಡುವಂಥವುಗಳನ್ನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.


ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು