Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:22 - ಪರಿಶುದ್ದ ಬೈಬಲ್‌

22 ಮೋಶೆಯು ಇಂತೆಂದಿದ್ದಾನೆ: ‘ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಆ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಆ ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೋಶೆಯು ಹೇಳಿದ್ದೇನಂದರೆ - ದೇವರಾಗಿರುವ ಕರ್ತನು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು, ಆತನು ನಿಮಗೆ ಹೇಳುವ ಎಲ್ಲಾ ಮಾತುಗಳಿಗೆ ಕಿವಿಗೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್ ಮೊಯ್ಜೆನ್ “ತುಮ್ಚೊ ದೆವ್ ಹೊಲ್ಲೊ ಧನಿ ತುಮ್ಕಾ ಎಕ್ ಪ್ರವಾದಿ ದಿತಾ, ತುಮ್ಚ್ಯಾ ಲೊಕಾಂಚ್ಯಾ ಮದ್ನಾಚ್ ತೊ ಪ್ರವಾದಿ ಯೆತಾ, ಅನಿ ತೊ ಮಾಜ್ಯಾ ಸಾರ್ಕೊಚ್ ರ್‍ಹಾತಾ ತ್ಯಾ ಪ್ರವಾದ್ಯಾನ್ ಸಾಂಗ್ತಲೆ ಹರ್ ಎಕ್ ಬಿ ತುಮಿ ಮಾನುಚೆ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:22
22 ತಿಳಿವುಗಳ ಹೋಲಿಕೆ  

“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ ಎಂದು ಹೇಳಿದನು.


ಆದರೆ ತಕ್ಕ ಕಾಲ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿದನು. ದೇವರ ಮಗನು ಸ್ತ್ರೀಯಲ್ಲಿ ಜನಿಸಿ, ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸಿದನು.


ಧರ್ಮಶಾಸ್ತ್ರವು ಮೋಶೆಯ ಮೂಲಕ ಕೊಡಲ್ಪಟ್ಟಿತು. ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮೂಲಕ ಬಂದವು.


ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.


ಅನಂತರ ನಾನು ಜೆರುಸಲೇಮಿಗೆ ಹೋಗಬೇಕು. ಏಕೆಂದರೆ ಪ್ರವಾದಿಗಳು ಅಲ್ಲೇ ಕೊಲ್ಲಲ್ಪಡತಕ್ಕದ್ದು.


ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.


ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು