Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:1 - ಪರಿಶುದ್ದ ಬೈಬಲ್‌

1 ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆದ್ರು ಅನಿ ಜುವಾಂವ್ ಲೊಕಾಂಚ್ಯಾಕ್ಡೆ ಬೊಲಿತ್ ರಾತಾನಾ ಅನಿ ಥೊಡಿ ಲೊಕಾ ತೆಚ್ಯಾ ಜಗ್ಗೊಳ್ ಯೆಲ್ಯಾನಿ ತ್ಯಾತುರ್ ಥೊಡಿಲೊಕಾ ಯಾಜಕಾ, ಅನಿ ಉಲ್ಲಿ ಲೊಕಾ ಸಾದುಸೆವಾಂಚಿ, ಅನಿ ದೆವಾಚಿ ಗುಡಿ ರಾಕ್ತಲ್ಯಾಂಚೊ ಮುಂಖಡ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:1
20 ತಿಳಿವುಗಳ ಹೋಲಿಕೆ  

ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು.


ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.


“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.


ಮಹಾಯಾಜಕರೂ ಧರ್ಮೋಪದೇಶಕರೂ ಮತ್ತು ಹಿರಿಯ ಯೆಹೂದ್ಯ ನಾಯಕರೂ ಅಲ್ಲಿದ್ದರು. ಇವರು ಸಹ ಇತರ ಜನರಂತೆ ಯೇಸುವನ್ನು ಗೇಲಿ ಮಾಡಿದರು.


ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.


ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.


ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,


ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು