Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:13 - ಪರಿಶುದ್ದ ಬೈಬಲ್‌

13 ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪೆದ್ರುಕ್ ಅನಿ ಜುವಾಂವಾಕ್ ಕಸ್ಲಿಬಿ ಶಿಕಾಪಾ ಗೊತ್ತ್ ನತ್ತಿ, ಖರೆ ತೆನಿ ಉಲ್ಲೆಬಿ ಭಿಂಯೆ ನಸ್ತಾನಾ ಬೊಲುನ್ಗೆತ್ ಹೊತ್ತೆ ಬಗುನ್ ಝಡ್ತಿ ಕರ್‍ತಲ್ಯಾ ತಾಂಡ್ಯಾಚಿ ಲೊಕಾ ಅಜಾಪ್ ಹೊಲ್ಯಾನಿ ಅನಿ ಹೆನಿ ಜೆಜುಚ್ಯಾ ವಾಂಗ್ಡಾ ಹೊತ್ತೊ ಮನುನ್ ತೆನಿ ಯಾದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:13
22 ತಿಳಿವುಗಳ ಹೋಲಿಕೆ  

ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.


ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.


ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.


ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.


ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.


ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.


ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು” ಎಂದು ಹೇಳಿದನು.


ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.


ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.


ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.


ಆ ವ್ಯಕ್ತಿಯ ಹೃದಯದಲ್ಲಿರುವ ರಹಸ್ಯ ಸಂಗತಿಗಳು ಬಯಲಾಗುತ್ತವೆ. ಆದ್ದರಿಂದ ಆ ವ್ಯಕ್ತಿಯು ಅಡ್ಡಬಿದ್ದು ದೇವರನ್ನು ಆರಾಧಿಸುವನು. “ನಿಜವಾಗಿಯೂ ದೇವರು ನಿಮ್ಮ ಸಂಗಡವಿದ್ದಾನೆ” ಎಂದು ಅವನು ಹೇಳುವನು.


ನಮಗೆ ಈ ನಿರೀಕ್ಷೆ ಇರುವುದರಿಂದ ನಾವು ಬಹಳ ಧೈರ್ಯವಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು