Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:21 - ಪರಿಶುದ್ದ ಬೈಬಲ್‌

21-22 ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ತ್ಯಾ ಜುದೆವಾಂಚ್ಯಾ ನ್ಯಾಯ್ ಕರ್‍ತಲ್ಯಾ ಮುಖಂಡಾಂಚ್ಯಾಕ್ಡೆ ಕಸ್ಲೆಬಿ ಶಿಕ್ಷಾ ದಿವ್ಕ್ ಹೊವ್ಕ್ ನಾ, ಪೆದ್ರುಕ್ ಅನಿ ಜುವಾಂವಾಕ್ ಉಶಾರ್ಕಿ ತವ್ಡೆಚ್ ದಿಲ್ಯಾನಿ ತೆಂಕಾ ಕಶ್ಯಾಕ್ ಮಟ್ಲ್ಯಾರ್ ಥೈ ಹೊಲ್ಲಿ ಸಂಗ್ತಿಯಾ ಬಗುನ್ ಲೊಕಾ ಸಗ್ಳ್ಯಿ ದೆವಾಕ್ ಹೊಗ್ಳಾಪ್ ಕರುಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:21
18 ತಿಳಿವುಗಳ ಹೋಲಿಕೆ  

ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.


ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.


‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.


ಅವರು ಯೇಸುವನ್ನು ಬಂಧಿಸಲು ಉಪಾಯ ಹುಡುಕಿದರೂ ಜನರಿಗೆ ಭಯಪಟ್ಟು ಬಂಧಿಸಲಿಲ್ಲ. ಏಕೆಂದರೆ ಯೇಸು ಒಬ್ಬ ಪ್ರವಾದಿ ಎಂದು ಜನರು ನಂಬಿದ್ದರು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾದರು. ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟಿದ್ದಕ್ಕಾಗಿ ಜನರು ದೇವರನ್ನು ಕೊಂಡಾಡಿದರು.


ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.


ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.


ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.


ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.


ಆದರೆ ಸಭಿಕರು, “ನಾವು ಪಸ್ಕಹಬ್ಬದ ಕಾಲದಲ್ಲಿ ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಏಕೆಂದರೆ ಜನರು ಕೋಪಗೊಂಡು ದಂಗೆ ಏಳಬಹುದು” ಎಂದು ಹೇಳಿದರು.


ಮೂಕರು ಮತ್ತೆ ಮಾತಾಡುವುದನ್ನೂ ಕುಂಟರು ನಡೆದಾಡುವುದನ್ನೂ ಅಂಗವಿಕಲರು ಸ್ವಸ್ಥರಾದದ್ದನ್ನೂ ಕುರುಡರಿಗೆ ಮತ್ತೆ ದೃಷ್ಟಿ ಬಂದದ್ದನ್ನೂ ಕಂಡು ಜನರೆಲ್ಲರೂ ಅತ್ಶಾಶ್ಚರ್ಯಪಟ್ಟು ಇಸ್ರೇಲರ ದೇವರನ್ನು ಕೊಂಡಾಡಿದರು.


ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.


ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು