Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:24 - ಪರಿಶುದ್ದ ಬೈಬಲ್‌

24 ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಆಯ್ಕಲ್ಲಿ ದೆವಾಚಿ ಲೊಕಾ ದೆವಾಕ್ ಮಾಗ್ನಿ ಕರುಸಾಟಿ ಎಕಾಕ್ಡೆ ಗೊಳಾ ಹೊಲಿ ಅನಿ ತೆನಿ ಎಕುಚ್ ಮನಾನ್, ಮೊಟ್ಯಾ ಧನಿಯಾ, ಸರ್‍ಗ್ ಅನಿ ಜಿಮಿನ್ ಸಮುಂದರ್ ಅನಿ ಜಗಾತ್ಲೆ ಹರ್ ಎಕ್‍ಬಿ ರಚಲೈ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:24
20 ತಿಳಿವುಗಳ ಹೋಲಿಕೆ  

ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!


ಯೆಹೋವನನ್ನು ಕೀರ್ತಿಸಿರಿ, ಯೆಹೋವನನ್ನು ಸ್ತುತಿಸಿರಿ. ಆತನು ಬಡಜನರ ಪ್ರಾಣಗಳನ್ನು ಉಳಿಸುತ್ತಾನೆ. ಆತನು ಅವರನ್ನು ದುಷ್ಟರ ದೌರ್ಜನ್ಯದಿಂದ ರಕ್ಷಿಸುತ್ತಾನೆ.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು