Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:36 - ಪರಿಶುದ್ದ ಬೈಬಲ್‌

36 ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತ್ಯಾ ಲೊಕಾತ್ನಿ ಜುಜೆ ಮನ್ತಲೊ ಹೊತ್ತೊ ತೊ ಸೈಪುನ್ ಮನ್ತಲೊ ಗಾಂವಾತ್ ಜಲಮ್ಮಲ್ಲೊ ಎಕ್ ಲೆವಿ ಹೊವ್ನ್ ಹೊತ್ತೊ ತೆಕಾ ಅಪೊಸ್ತಲಾ ಬಾನಾರ್ಬಾ ಮನುನ್ ಬಲ್ಯಿತ್. ಬರ್ನಾಬಾ ಮಟ್ಲ್ಯಾರ್ ಉಮ್ಮೆದ್ ದಿತಲೊ ಮಾನುಸ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:36
24 ತಿಳಿವುಗಳ ಹೋಲಿಕೆ  

ಹೀಗೆ ಪೇತ್ರನು ಕಪಟತನದಿಂದ ವರ್ತಿಸಿದನು. ಯೆಹೂದ್ಯರಾದ ವಿಶ್ವಾಸಿಗಳು ಸಹ ಪೇತ್ರನನ್ನೇ ಅನುಸರಿಸಿ ಕಪಟತನದಿಂದ ವರ್ತಿಸಿದರು. ಇವರ ವರ್ತನೆಯಿಂದ ಬಾರ್ನಬನು ಸಹ ಪ್ರಭಾವಿತನಾದನು.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಹದಿನಾಲ್ಕು ವರ್ಷಗಳ ನಂತರ ಬಾರ್ನಬನ ಜೊತೆಯಲ್ಲಿ ತೀತನನ್ನು ಕರೆದುಕೊಂಡು ಮತ್ತೆ ಜೆರುಸಲೇಮಿಗೆ ಹೋದೆನು.


ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.


ಬಾರ್ನಬನು ಮತ್ತು ನಾನು ಮಾತ್ರ ನಮ್ಮ ಜೀವನಕ್ಕೆ ಬೇಕಾದದ್ದನ್ನು ದುಡಿದು ಸಂಪಾದಿಸಿಕೊಳ್ಳಬೇಕೇ?


ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.


ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಬಾರ್ನಬನ ಇಷ್ಟವಾಗಿತ್ತು.


ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.


ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.


ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.


ಜಿಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನ (ಯೇಸು ಅವರಿಗೆ ಬೊವನೆರ್ಗೆಸ್ ಎಂಬ ಹೆಸರನ್ನಿತ್ತನು. ಈ ಹೆಸರಿಗೆ “ಸಿಡಿಲಿನ ಜನರು” ಎಂದರ್ಥ.)


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.


ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.


ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.


ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.


ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.


ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.


ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು