Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:14 - ಪರಿಶುದ್ದ ಬೈಬಲ್‌

14 ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮತ್ತು ಇನ್ನು ಎಷ್ಟೋ ಮಂದಿ ಸ್ತ್ರೀಪುರುಷರು ಕರ್ತನಲ್ಲಿ ನಂಬಿಕೆಯಿಟ್ಟು ಅವರ ಮಂಡಳಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಲೈ ಲೊಕಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಲಾಗಲಿ ,ಅನಿ ಲೈ ಲೊಕಾ ಘೊಮಾನ್ಸಾ ಅನಿ ಬಾಯ್ಕಾ ಮನ್ಸಾನಿ ಧನಿಯಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:14
24 ತಿಳಿವುಗಳ ಹೋಲಿಕೆ  

ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.


ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.


ದಾವೀದನು ಇಸ್ರೇಲಿನ ಜನರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ತುಂಡು ರೊಟ್ಟಿಯನ್ನೂ ಒಣಗಿದ ದ್ರಾಕ್ಷೆಹಣ್ಣಿನ ಉಂಡೆಯನ್ನೂ ಒಂದು ತುಂಡು ಮಾಂಸವನ್ನೂ ಕೊಟ್ಟನು. ಆಗ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.


ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು