Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:2 - ಪರಿಶುದ್ದ ಬೈಬಲ್‌

2 ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಒಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆನಿ ಗಾವಲ್ಲ್ಯಾ ಪೈಸ್ಯಾತ್ ಅಪೊಸ್ತಲಾಕ್ನಿ ದಿತಾನಾ ಉಲ್ಲೆ ಪೈಸೆ ಅಪ್ನಾ ಸಾಟ್ನಿ ಮನುನ್ ನಿಪ್ವುನ್ ಥವ್ನ್ ಘೆಟಲ್ಯಾನಿ ಹೆ ತೆಜಾ ಬಾಯ್ಕೊ ಬಿ ಗೊತ್ತ್ ಅನಿ ತೆನಿ ಬಿ ಹೆಕಾ ಒಪ್ಕಿ ದಿಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:2
16 ತಿಳಿವುಗಳ ಹೋಲಿಕೆ  

ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.


ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?


ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.


“ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.


ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು.


ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು