Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:39 - ಪರಿಶುದ್ದ ಬೈಬಲ್‌

39 ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖರೆ ತಿ ಯವ್ಜನ್ ದೆವಾಕ್ನಾ ಯೆಲ್ಲಿ ಹೊಲ್ಯಾರ್ ತುಮಿ ತೆಂಕಾ ಅಡ್ಕಳ್ ಕರುಕ್ ಹೊಯ್ನಾ ತುಮಿ ದೆವಾಕುಚ್ ವಿರೊಧ್ ಹೊವ್ನ್ ಝಗ್ಡೊ ಕರ್‍ಲೆ ಸಾರ್ಕೆ ಹೊತಾ! ಮನುನ್ ಸಾಂಗಲ್ಯಾನ್ ತನ್ನಾ ಗಮಲಿಯೆಲಾಚ್ಯಾ ಸಲಹಾಕ್ನಿ ಜುದೆವಾಂಚ್ಯಾ ಮುಖಂಡಾನಿ ಒಪ್ಪುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:39
23 ತಿಳಿವುಗಳ ಹೋಲಿಕೆ  

ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.


ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.


“ನಾನು ಯಾವಾಗಲೂ ದೇವರಾಗಿದ್ದೇನೆ. ನನ್ನ ಕಾರ್ಯವನ್ನು ತಡೆಯಲು ಯಾರಿಗೆ ಸಾಧ್ಯ? ನನ್ನ ಬಲವಾದ ಹಸ್ತದಿಂದ ಯಾರು ಬಿಡಿಸಬಲ್ಲರು?”


“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.


ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!


ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.


ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು