ಅಪೊಸ್ತಲರ ಕೃತ್ಯಗಳು 5:42 - ಪರಿಶುದ್ದ ಬೈಬಲ್42 ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹಿರೀಸಭೆಯ ಎದುರಿನಿಂದ ಹೊರಟುಹೋಗಿ ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ವಿಷಯವಾದ ಶುಭವರ್ತಮಾನವನ್ನು ಸಾರುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತೆನಿ ಲೊಕಾಕ್ನಿ ಶಿಕ್ವುತಲೆ ಬಂದ್ ಕರುಕ್ನಾತ್, ಜೆಜುಚ್ ಕ್ರಿಸ್ತ್ ಮನ್ತತ್ಲಿ ಬರಿ ಖಬರ್ ಲೊಕಾಕ್ನಿ ಸಾಂಗುಲಾಲೆ ತೆನಿ ಹರ್ ಎಕ್ ದಿಸಾಬಿ ಗುಡಿತ್ನಿ, ಅನಿ ಲೊಕಾಂಚ್ಯಾ ಘರಾತ್ನಿ ಶಿಕಾಪ್ ಕರಿತ್ ಹೊತ್ತೆ. ಅಧ್ಯಾಯವನ್ನು ನೋಡಿ |
ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.