Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:6 - ಪರಿಶುದ್ದ ಬೈಬಲ್‌

6 ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಪೊಸ್ತಲರು ಅವರ ಮೇಲೆ ಕೈಗಳನ್ನಿಟ್ಟು ಪ್ರಾರ್ಥನೆಮಾಡಿ ಆ ಕಾರ್ಯಕ್ಕಾಗಿ ಅವರನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಹ್ಯಾ ಸಾತ್ ಲೊಕಾಕ್ನಿ ಅಪೊಸ್ತಲಾಂಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ, ಅಪೊಸ್ತಲಾನಿ ಮಾಗ್ನಿ ಕರುನ್ ತೆಂಚ್ಯಾ ಟಕ್ಲ್ಯಾಂಚ್ಯಾ ವರ್‍ತಿ ಅಪ್ಲಿ ಹಾತಾ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:6
14 ತಿಳಿವುಗಳ ಹೋಲಿಕೆ  

ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.


ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು.


ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”


ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.


ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.


ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು.


ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


“ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.


ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.


ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು