Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:10 - ಪರಿಶುದ್ದ ಬೈಬಲ್‌

10 ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಕಾ ಯೆಲ್ಲ್ಯಾ ತರಾಸಾಂತ್ನಾ ದೆವಾನ್ ಸೊಡ್ವುಲ್ಯಾನ್, ಇಜಿಪ್ತ್ ದೆಶಾತ್ ಫೆರೊಹ್ ರಾಜಾಕ್ನಾ ದಯಾ ಗಾಯ್ ಸಾರ್ಕೊ ಹೊಲೆ, ಅನಿ ತೆಕಾ ರಾಜಾನ್ ಇಜಿಪ್ತ್ ,ಅನಿ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ಅದಿಪತಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:10
19 ತಿಳಿವುಗಳ ಹೋಲಿಕೆ  

ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ಆದರೆ ಯೆಹೋವನು ಯೋಸೇಫನ ಸಂಗಡವಿದ್ದು ಕರುಣೆತೋರಿದನು. ಸ್ವಲ್ಪಕಾಲವಾದ ಮೇಲೆ ಸೆರೆಮನೆಯ ಮುಖ್ಯಾಧಿಕಾರಿಯು ಯೋಸೇಫನನ್ನು ಪ್ರೀತಿಸತೊಡಗಿದನು.


ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.


“ಯೆರೆಮೀಯನನ್ನು ಪತ್ತೆಹಚ್ಚಿ ಅವನ ಕ್ಷೇಮದ ಬಗ್ಗೆ ಎಚ್ಚರಿಕೆವಹಿಸಿರಿ, ಅವನಿಗೆ ನೋವಾಗದಂತೆ ನೋಡಿಕೊಳ್ಳಿ. ಅವನು ಕೇಳಿದ್ದನ್ನೆಲ್ಲ ಕೊಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು