Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:15 - ಪರಿಶುದ್ದ ಬೈಬಲ್‌

15 ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಅವನೂ ನಮ್ಮ ಪಿತೃಗಳೂ ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾನಾ ಜಾಕೊಬ್ ಇಜಿಪ್ತ್ ದೆಶಾಕ್ ಗೆಲೊ, ಅಮ್ಚ್ಯಾ ಪುರ್ವಜಾಂಚೆ ಮ್ಹರಾನ್ ಹೊಯ್ ಪತರ್ ಬಿ ತೆನಿ ಥೈಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:15
13 ತಿಳಿವುಗಳ ಹೋಲಿಕೆ  

ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.


ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.


ಇಸಾಕನಿಗೆ ಯಾಕೋಬ ಮತ್ತು ಏಸಾವ ಎಂಬ ಗಂಡುಮಕ್ಕಳನ್ನು ಕೊಟ್ಟೆನು. ಏಸಾವನಿಗೆ ಸೇಯೀರ್ ಪರ್ವತಗಳ ಸುತ್ತಮುತ್ತಲಿನ ಪ್ರದೇಶವನ್ನು ಕೊಟ್ಟೆನು. ಯಾಕೋಬ ಮತ್ತು ಅವನ ಮಕ್ಕಳು ಅಲ್ಲಿ ಇರಲಿಲ್ಲ. ಅವರು ಈಜಿಪ್ಟ್ ದೇಶದಲ್ಲಿ ವಾಸಮಾಡಲು ಹೋಗಿದ್ದರು.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.


ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.


ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.


ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.


ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.


ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)


ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು