Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:2 - ಪರಿಶುದ್ದ ಬೈಬಲ್‌

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:2
29 ತಿಳಿವುಗಳ ಹೋಲಿಕೆ  

ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾಸ್ವರೂಪನಾದ ದೇವರ ಸ್ವರವು ಕೇಳಿಬರುವುದು.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ನೀನೇ ದೇವರಾದ ಯೆಹೋವನು. ಅಬ್ರಾಮನನ್ನು ನೀನೇ ಆರಿಸಿಕೊಂಡೆ. ಬಾಬಿಲೋನಿನ ಊರ್ ಎಂಬಲ್ಲಿಂದ ನೀನು ಅವನನ್ನು ನಡೆಸಿದೆ. ಅವನ ಹೆಸರನ್ನು ಬದಲಾಯಿಸಿ ಅಬ್ರಹಾಮನೆಂದು ಕರೆದೆ.


ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.


“ನಮ್ಮ ಪ್ರಭುವೇ, ನಮ್ಮ ದೇವರೇ! ನೀನು ಪ್ರಭಾವ, ಗೌರವ, ಅಧಿಕಾರಗಳನ್ನು ಪಡೆಯಲು ಯೋಗ್ಯನಾಗಿರುವೆ. ಎಲ್ಲವನ್ನೂ ನಿರ್ಮಿಸಿದಾತನು ನೀನೇ. ನಿನ್ನ ಚಿತ್ತದಂತೆಯೇ ಎಲ್ಲವೂ ಇದ್ದವು; ಎಲ್ಲವೂ ಸೃಷ್ಟಿಗೊಂಡವು.”


ನಮ್ಮ ಮಹಾದೇವರು ಮತ್ತು ರಕ್ಷಕನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಿರುವ ನಾವು ಆ ರೀತಿಯಲ್ಲಿಯೇ ಬಾಳಬೇಕು. ಆತನೇ ನಮ್ಮ ಮಹಾ ನಿರೀಕ್ಷೆಯಾಗಿದ್ದಾನೆ. ಆತನು ತನ್ನ ಮಹಿಮೆಯೊಂದಿಗೆ ಬರುತ್ತಾನೆ.


ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.


ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.


“ಮೇಲಿನಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.


ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.


ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.


ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.


ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.


ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.


ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.


ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು